Home Bibles ಯೆರೆಮಿಯ 39:14 · ಕನ್ನಡ ಬೈಬಲ್
ಯೆರೆಮಿಯ 39:14 · ಕನ್ನಡ ಬೈಬಲ್

ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

Cross references

2 ಅರಸುಗಳು 22:12

ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--

2 ಅರಸುಗಳು 25:22

ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.

ಕೀರ್ತನೆಗಳು 105:19

ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.

ಯೆರೆಮಿಯ 26:22

ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 37:21

ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--

ಯೆರೆಮಿಯ 38:13

ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.

ಯೆರೆಮಿಯ 39:15

ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

ಯೆರೆಮಿಯ 40:1

ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.

ಯೆರೆಮಿಯ 40:7

ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.

Interlinear

Choose Theme