ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Cross references
ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.