ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
Cross references
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.