ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
Cross references
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.