ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
Cross references
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ