ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
Cross references
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.