ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
Cross references
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;