ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
Cross references
ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.