ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
Cross references
ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.