ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
Cross references
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,