ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
Cross references
ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.