ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
Cross references
ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು.
ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.