ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
Cross references
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.