ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Cross references
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು