ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
Cross references
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.