ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
Cross references
ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.