ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವದು.
Cross references
ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.