ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
Cross references
ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.