ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
Cross references
ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.