Home Bibles ಯೆರೆಮಿಯ 49:23 · ಕನ್ನಡ ಬೈಬಲ್
ಯೆರೆಮಿಯ 49:23 · ಕನ್ನಡ ಬೈಬಲ್

ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!

Cross references

ಆದಿಕಾಂಡ 14:15

ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ

ಆದಿಕಾಂಡ 15:2

ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.

ಅಂಕೆಗಳ ಪುಸ್ತಕ 13:21

ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.

ದ್ವಿತೀಯೋಪದೇಶಕಾಂಡ 20:8

ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

ಯೆಹೋಶುವ 2:11

ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.

ಯೆಹೋಶುವ 14:8

ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

2 ಸಮುವೇಲ 8:9

ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ

2 ಸಮುವೇಲ 17:10

ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.

1 ಅರಸುಗಳು 11:24

ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.

2 ಅರಸುಗಳು 17:24

ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

2 ಅರಸುಗಳು 18:34

ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು

2 ಅರಸುಗಳು 19:13

ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.

2 ದಿನವೃತ್ತಾಂತ 16:2

ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.

ಕೀರ್ತನೆಗಳು 107:26

ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.

ಯೆಶಾಯ 10:9

ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್‌ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?

ಯೆಶಾಯ 11:11

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಯೆಶಾಯ 13:7

ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.

ಯೆಶಾಯ 17:1

ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.

ಯೆಶಾಯ 37:13

ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಯೆಶಾಯ 57:20

ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

ಆಮೋಸ 1:3

ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.

ಆಮೋಸ 6:2

ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?

ನಹೂಮ 2:10

ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.

ಜೆಕರ್ಯ 9:1

ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.

ಜೆಕರ್ಯ 9:2

ಹಮಾತು ಬಹಳ ಜ್ಞಾನವಿರುವ ತೂರ್‌ ಚೀದೋನ್‌ ಸಹ ಅದರ ಮೇರೆಯಾಗಿದೆ.

ಲೂಕ 8:23

ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.

ಲೂಕ 21:25

ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

ಅಪೋಸ್ತಲರ ಕೃತ್ಯಗಳು 9:2

ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.

ಅಪೋಸ್ತಲರ ಕೃತ್ಯಗಳು 27:20

ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.

2 ಕೊರಿಂಥದವರಿಗೆ 11:32

ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.

Interlinear

Choose Theme