ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
Cross references
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.