ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
Cross references
ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.