ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Cross references
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.