ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
Cross references
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?