ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
Cross references
ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.