ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
Cross references
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು