ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
Cross references
ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,