ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
Cross references
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.