ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
Cross references
ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.