ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
Cross references
ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.