ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.