ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
Cross references
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.