ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
Cross references
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ