ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
Cross references
ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.