Home Bibles ಯೆರೆಮಿಯ 51:33 · ಕನ್ನಡ ಬೈಬಲ್
ಯೆರೆಮಿಯ 51:33 · ಕನ್ನಡ ಬೈಬಲ್

ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.

Cross references

ಯೆಶಾಯ 17:5

ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.

ಯೆಶಾಯ 18:5

ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.

ಯೆಶಾಯ 21:10

ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.

ಯೆಶಾಯ 41:15

ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.

ಹೊಶೇಯ 6:11

ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.

ಯೋವೇಲ 3:13

ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.

ಆಮೋಸ 1:3

ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.

ಮೀಕ 4:12

ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.

ಮೀಕ 4:13

ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.

ಹಬಕ್ಕೂಕ 3:12

ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.

ಮತ್ತಾಯ 13:30

ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

ಮತ್ತಾಯ 13:39

ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.

ಪ್ರಕಟನೆ 14:15

ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.

Interlinear

Choose Theme