ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Cross references
ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.