ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Cross references
ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.