ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Cross references
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.