ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
Cross references
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.