ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
Cross references
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ.
ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.