Home Bibles ಯೆರೆಮಿಯ 7:13 · ಕನ್ನಡ ಬೈಬಲ್
ಯೆರೆಮಿಯ 7:13 · ಕನ್ನಡ ಬೈಬಲ್

ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

Cross references

2 ದಿನವೃತ್ತಾಂತ 36:15

ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

ನೆಹೆಮ್ಯ 9:29

ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

ಸಾಮೇತಿಗಳು 1:24

ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

ಯೆಶಾಯ 50:2

ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.

ಯೆಶಾಯ 65:12

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಯೆಶಾಯ 66:4

ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

ಯೆರೆಮಿಯ 5:21

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.

ಯೆರೆಮಿಯ 6:10

ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?

ಯೆರೆಮಿಯ 11:7

ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.

ಯೆರೆಮಿಯ 11:8

ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.

ಯೆರೆಮಿಯ 13:10

ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.

ಯೆರೆಮಿಯ 25:3

ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.

ಯೆರೆಮಿಯ 26:5

ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.

ಯೆರೆಮಿಯ 29:19

ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.

ಯೆರೆಮಿಯ 35:14

ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ಯೆರೆಮಿಯ 35:15

ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.

ಯೆರೆಮಿಯ 35:17

ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.

ಯೆರೆಮಿಯ 44:4

ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

ಹೊಶೇಯ 9:17

ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.

ಹೊಶೇಯ 11:2

ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್‌ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

ಹೊಶೇಯ 11:7

ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

ಜೆಕರ್ಯ 7:13

ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.

ಮತ್ತಾಯ 23:37

ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

Interlinear

Choose Theme