ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
Cross references
ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.