ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
Cross references
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.