ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
Cross references
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.