Home Bibles ಯೆರೆಮಿಯ 8:13 · ಕನ್ನಡ ಬೈಬಲ್
ಯೆರೆಮಿಯ 8:13 · ಕನ್ನಡ ಬೈಬಲ್

ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ

Cross references

ಲೇವ್ಯಕಾಂಡ 26:20

ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.

ದ್ವಿತೀಯೋಪದೇಶಕಾಂಡ 28:39

ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.

ಕೀರ್ತನೆಗಳು 1:3

ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಯೆಶಾಯ 5:4

ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ಯೆಶಾಯ 5:10

ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.

ಯೆಶಾಯ 24:21

ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.

ಯೆರೆಮಿಯ 5:17

ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.

ಯೆರೆಮಿಯ 14:15

ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.

ಯೆರೆಮಿಯ 17:8

ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

ಯೆಹೆಜ್ಕೇಲ 22:19

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.

ಯೆಹೆಜ್ಕೇಲ 22:31

ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 24:3

ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.

ಹೊಶೇಯ 2:8

ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.

ಯೋವೇಲ 1:7

ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.

ಯೋವೇಲ 1:10

ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.

ಹಬಕ್ಕೂಕ 3:17

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

ಹಗ್ಗಾಯ 1:11

ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

ಹಗ್ಗಾಯ 2:17

ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಮಲಾಕಿ 3:11

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 21:19

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಲೂಕ 13:6

ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

ಯಾಕೋಬ 1:11

ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.

Interlinear

Choose Theme