ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
Cross references
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.