ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
Cross references
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.