ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
Cross references
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.