ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
Cross references
ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.