ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
Cross references
ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.